Skip to main content

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿ ಸ್ಪರ್ಧೆಗಳಿಗೆ ಆಯ್ಕೆಯಾದ ಕ್ರೀಡಾ ಪಟುಗಳ ONLINE ನೊಂದಣಿ - 2026 (V.1)

ಆರೋಗ್ಯ ಇಲಾಖೆಯ ಜ್ವಲಂತ ಸಮಸ್ಯೆಗಳ ಕುರಿತಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಸಿ.ಎಸ್.ಷಡಾಕ್ಷರಿರವರ ನೇತೃತ್ವದ ಆರೋಗ್ಯ ಇಲಾಖೆಯ ನಿಯೋಗವು ಇಂದು ನಡೆದ ಸಭೆಯಲ್ಲಿ ಮಾನ್ಯ ಆರೋಗ್ಯ ಇಲಾಖೆ ಸಚಿವರ ಗಮನಕ್ಕೆ ತಂದು ಶೀಘ್ರವಾಗಿ ಈ ಸಮಸ್ಯಗಳ ಇತ್ಯರ್ಥಪಡಿಸುವಂತೆ ಮನವಿ ಮಾಡಿದರು.

 
ಆರೋಗ್ಯ ಇಲಾಖೆಯ ಜ್ವಲಂತ ಸಮಸ್ಯೆಗಳ ಕುರಿತಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಸಿ.ಎಸ್.ಷಡಾಕ್ಷರಿರವರ ನೇತೃತ್ವದ ಆರೋಗ್ಯ ಇಲಾಖೆಯ ನಿಯೋಗವು ಇಂದು ನಡೆದ ಸಭೆಯಲ್ಲಿ ಮಾನ್ಯ ಆರೋಗ್ಯ ಇಲಾಖೆ ಸಚಿವರ ಗಮನಕ್ಕೆ ತಂದು ಶೀಘ್ರವಾಗಿ ಈ ಸಮಸ್ಯಗಳ ಇತ್ಯರ್ಥಪಡಿಸುವಂತೆ ಮನವಿ ಮಾಡಿದರು.



ದಿನಾಂಕ:08-04-2021ರಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಸಿ.ಎಸ್.ಷಡಾಕ್ಷರಿರವರ ರವರ ನಿಯೋಗವು  ಆರೋಗ್ಯ ಇಲಾಖೆ ನೌಕರರ ಸಂಘದ ಅಧ್ಯಕ್ಷರಾದ ಎ.ಪುಟ್ಟಸ್ವಾಮಿ ಮತ್ತು ಗೌರವಾಧ್ಯಕ್ಷರು ಹಾಗೂ ನೌಕರರ ಸಂಘದ ಖಜಾಂಚಿಗಳಾದ ಆರ್.ಶ್ರೀನಿವಾಸ್‍ರವರುಗಳು ಇಲಾಖೆ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಮ.ಸ. ನಂಜುಡಸ್ವಾಮಿರವರು ಮತ್ತು ನೌಕರರ ಕೇಂದ್ರ ಸಂಘದ ಉಪಾಧ್ಯಕ್ಷರು ಮತ್ತು ಬಾಗಲಕೋಟೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ ಎಂ ಬಳ್ಳಾರಿ, ಬೆಂಗಳೂರು ವಿಭಾಗೀಯ ಉಪಾಧ್ಯಕ್ಷರಾದ ಮೋಹನ್ ಕುಮಾರ್, ಪ್ರಕಾಶ್ ಗಿಡ್ಡೆ ಆರೋಗ್ಯ ಇಲಾಖೆ ಬೈಲಾ ಸಮಿತಿ ಅಧ್ಯಕ್ಷರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಸೇವೆಗಳ ಇಲಾಖಾ ನೌಕರರ ಬೇಡಿಕೆಗಳ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರೊಂದಿಗೆ ವಿಕಾಸಸೌಧದಲ್ಲಿ   ನೌಕರರ ಸಮಸ್ಯೆಗಳ ಪರಿಹಾರಕ್ಕಾಗಿ ಸಭೆ ನಡೆಸಲಾಯಿತು. ಮಾನ್ಯ ಸಚಿವರು ಈ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸಲು ಸಕರಾತ್ಮಕವಾಗಿ ಸ್ಪಂದಿಸಿದರು.

ಸಭೆಯಲ್ಲಿ ಚರ್ಚಿಸಲಾದ ವಿಷಯಗಳು

1. ನೆರೆ-ಹೊರೆ ರಾಜ್ಯಗಳ ಮಾದರಿಯಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ವಿಲೀನಗೊಳಿಸುವುದು. 

2. ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮಗಳನ್ನು ತಿದ್ದುಪಡಿ ಮಾಡುವುದು.

3. ಇಲಾಖಾ ಪದೋನ್ನತಿ ಸಮಿತಿ ರಚಿಸಿ, ಅರ್ಹ ನೌಕರರಿಗೆ ಸೇವಾ ಜೇಷ್ಠತೆ ಅನ್ವಯ ಬಡ್ತಿ ಅವಕಾಶ ಕಲ್ಪಿಸುವುದು 

4. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವೈದ್ಯರಿಗೆ  ನೀಡುತ್ತಿರುವ ವಿಶೇಷ ಭತ್ಯೆಯನ್ನು ಇಲಾಖೆಯ ಇತರೆ ಸಿಬ್ಬಂದಿಗಳಿಗೂ ಮಂಜೂರು ಮಾಡುವುದು.

5. ಕೋವಿಡ್-19ರ ಕರ್ತವ್ಯ ನಿರತ ಸಿಬ್ಬಂದಿಗಳಿಗೆ ಕೋವಿಡ್ ಭತ್ಯೆ ನೀಡುವ ಬಗ್ಗೆ.

6. ಖಾಲಿ ಇರುವ ಎಲ್ಲಾ ವೃಂದಗಳ ಹುದ್ದೆಗಳನ್ನು ಭರ್ತಿ ಮಾಡುವುದು.

7. ಬಯೋಮೆಟ್ರಿಕ್  ಹಾಜರಾತಿಯಿಂದ ವಿನಾಯಿತಿ ನೀಡುವ ಬಗ್ಗೆ:

8. ಧೀರ್ಘಾವಧಿಯಿಂದ ಬಾಕಿಯಿರುವ ಇಲಾಖಾ ವಿಚಾರಣೆ ಕತಡಗಳನ್ನು ತ್ವರಿತವಾಗಿ ಇತ್ಯರ್ಥಪಡಿಸುವುದು.

9. ಅಮಾನತ್ತು ಪ್ರಸ್ತಾವನೆಗಳನ್ನು ಶೀಘ್ರ ಇತ್ಯರ್ಥಗೊಳಿಸುವುದು

10. ನೌಕರರ ಸೇವಾ ಸವಲತ್ತುಗಳನ್ನು ಕಾಲಮಿತಿಯೊಳಗೆ ನೀಡುವುದು:

11. ಆರೋಗ್ಯ ಸೌಧ ಕಟ್ಟಡದಲ್ಲಿ ಆರೋಗ್ಯ ಕೇಂದ್ರವನ್ನು ಪ್ರಾರಂಭಿಸುವುದು.

12. ಉತ್ತರ ಕರ್ನಾಟಕ ಭಾಗದ ವಿಜಯಪುರದಲ್ಲಿ ಆರಂಭಿಸಿರುವ  ಅಪರ ನಿರ್ದೇಶಕರ ಕಛೇರಿಯನ್ನು ಬಲವರ್ಧನೆಗೊಳಿಸುವುದು. 

ಈ ಸಂದರ್ಭದಲ್ಲಿ ಇಲಾಖೆಯ ನಿರ್ದೇಶಕರಾದ ಶ್ರೀ ಓಂ ಪ್ರಕಾಶ್ ಪಾಟೀಲ್‍ರವರು  ಹಾಗೂ ಪದಾಧಿಕಾರಿಗಳಾದ ಎಸ್. ರಾಜು, ಬಿ.ಆರ್. ಕುಲಕರ್ಣಿ, ಕೆ.ಎಂ. ಪುರುಷೋತ್ತಮ್, ರಾಜಕುಮಾರ್ ಮಾಳಗೆ, ಕುಂಬಾರ್, ಡಾ.ಎಂ.ಆರ್. ರಾಮಚಂದ್ರರೆಡ್ಡಿ, ಪುಟ್ಟರಾಜು, ತಿಮ್ಮರಾಜು. ನಾಗರಾಜು, ಎನ್.ಎಂ. ಬಡಕಲಿ, ಚಿದಾನಂದ, ಅರುಣ್ ಕುಮಾರ್, ಮುನಿಆಂಜಿನಪ್ಪ, ಮಲ್ಲಿಕಾರ್ಜುನ್, ದೇಸಾಯಿ ಮತ್ತು  ಬಿ.ಕೆ. ಗಿರಿಗೌಡ ಇನ್ನಿತರರು ಈ ಸಭೆಯಲ್ಲಿ ಹಾಜರಿದ್ದರು.


Comments

Popular posts from this blog

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕಬ್ಬನ್ ಉದ್ಯಾನವನ , ಬೆಂಗಳೂರು- 01 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025   ಆತ್ಮೀಯ ನೌಕರ ಬಾಂಧವರೇ...... 2025 ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಕೆಳಗಿನ ಲಿಂಕ್ ಮುಖಾಂತರ ಅರ್ಜಿಯನ್ನು ಸಲ್ಲಿಸುವುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05-06 -2025. Online ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅಗತ್ಯ ಮಾಹಿತಿಗಾಗಿ KSGEA NEWS YOUTUBE                                         ಚಾನಲ್‌ಗೆ ಭೇಟಿ ನೀಡಿ. ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು     ವಿದ್ಯಾರ್ಥಿಯ ತಂದೆ/ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯಲ್ಲಿ ಖಾಯಂ ಸರ್ಕಾರಿ ನೌಕರರಾಗಿರಬೇಕು.  ನಿಗಮ , ಮಂಡಳಿ , ಪ್ರಾಧಿಕಾರ , ವಿಶ್ವವಿದ್ಯಾಲಯ , ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಗಳಲ್ಲಿ ನೇಮ...

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿ.

 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿ. ಆತ್ಮೀಯ ನೌಕರ ಬಾಂಧವರೇ...... 2023ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿಯನ್ನು ಬಿಡುಗಡೆಗೊಳಿಸಲಾಗುತ್ತಿದೆ. ಪ್ರತಿಭಾಪುರಸ್ಕಾರ ಕಾರ್ಯಕ್ರಮವನ್ನು ಜಿಲ್ಲಾವಾರು ಹಮ್ಮಿಗೊಳ್ಳಲಾಗುತ್ತಿದ್ದು, ಸ್ಥಳ ಹಾಗೂ ಸಮಯವನ್ನು ಮುಂದೆ ತಿಳಿಸಲಾಗುವುದು. ಆಯ್ಕೆಯಾದ ವಿದ್ಯಾರ್ಥಿಗಳ ಪಟ್ಟಿಯನ್ನು ವೀಕ್ಷಿಸಲು ಈ ಕೆಳಕಂಡ ಲಿಂಕ್ ಬಳಸಿ.  https://drive.google.com/drive/folders/1DvfkOB5L_JW2j8bGNL8iU9i2wNLDhv49?usp=sharing

2024-25ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ/ನೌಕರರು Online ನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರು 2024-25 ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ/ನೌಕರರು Online ನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ.      2024-25 ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ಕರ್ನಾಟಕ ರಾಜ್ಯವನ್ನು ಪ್ರಿತಿನಿಧಿಸಿ ವಿವಿಧ ಕ್ರೀಡೆಗಳಲ್ಲಿ ಪ್ರಥಮ/ದ್ವಿತೀಯ/ತೃತೀಯ ಸ್ಥಾನದಲ್ಲಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ ನೌಕರರಿಗೆ ದಿನಾಂಕ: 18-05-2025 ರಂದು ಶಿವಮೊಗ್ಗದಲ್ಲಿ ನಡೆಯಲಿರುವ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಉದ್ಘಾಟನಾ ಸಮಾರಂಭದಲ್ಲಿ “ಅಭಿನಂದನೆ” ಸಲ್ಲಿಸಲು ಉದ್ದೇಶಿಸಲಾಗಿದೆ.     ರಾ ಷ್ಟ್ರ ಮಟ್ಟದ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ಭಾಗವಹಿಸಿ   ಪ್ರಥಮ/ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದು ವಿಜೇತರಾದ ಕ್ರೀಡಾಪಟುಗಳು ಮಾತ್ರ ಹೆಸರು ನೋಂದಾಯಿಸಿಕೊಳ್ಳಲು ಈ ಕೆಳಕಂಡ ಲಿಂಕ್ ಮುಖಾಂತರ Online ನಲ್ಲಿ ಅರ್ಜಿ ಸಲ್ಲಿಸಲು ತಿಳಿಸಿದೆ.       -: ಅರ್ಜಿ ಸಲ್ಲಿಸಲು ನಿಬಂಧನೆಗಳು :- 1.    2024-25 ನೇ ಸಾಲಿನಲ್ಲಿ ವಿಜೇತರಾದ ಕ್ರೀಡಾಪಟುಗಳು ಮಾತ್ರ ಸಂಘವು ಬಿಡುಗಡೆಗೊಳಿಸಿರುವ ನಮೂನೆಯನ್ನು ಭರ್...

Followers